ಗದಗ: ಪ್ರಾಮಾಣಿಕ ಬಡ ಜನರು ದೇಶ ಕಟ್ಟುವ ಕಾರ್ಯದಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದು, ಬೀದಿ ಬದಿ ವ್ಯಾಪಾಸ್ಥರು ಸ್ವಾಭಿಮಾನದಿಂದ ತಮ್ಮ ಬದುಕು ಸಾಗಿಸಲು ಅನುವಾಗಲು ಹೈ-ಟೆಕ್ ತಳ್ಳುಗಾಡಿಗಳನ್ನು ವಿತರಿಸಲಾಗುತ್ತಿದೆ ಎಂದು ಕಾನೂನು, ನ್ಯಾಯ, ಮಾನವ ಹಕ್ಕುಗಳು, ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಇಲಾಖೆ ಹಾಗೂ ಗದಗ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಕೆ.ಪಾಟೀಲ ಹೇಳಿದರು.







ನಗರದ ಕೆ.ಎಚ್.ಪಾಟೀಲ ವೃತ್ತದಲ್ಲಿ ಬೀದಿ ಬದಿ ವ್ಯಾಪರಸ್ಥರಿಗೆ ಹೈ-ಟೆಕ್ ತಳ್ಳುಗಾಡಿಗಳನ್ನು ವಿತರಿಸಿ ಅವರು ಮಾತನಾಡಿದರು. ಶತಮಾನಗಳಿಂದ ಸಮಾಜದಲ್ಲಿ ಬಡ ಜನರನ್ನು ಅಸೂಯೆಯಿಂದ ನೋಡಲಾಗುತ್ತಿತ್ತು. ಇಂದಿರಾ ಗಾಂಧೀ ಅವರು ಬಡ ಜನರನ್ನು ಸ್ವಾಭಿಮಾನಿಗಳನ್ನಾಗಿಸುವ ದಿಸೆಯಲ್ಲಿ ಅನೇಕ ಯೋಜನೆಗಳನ್ನು ಜಾರಿಗೆ ತದಂತಹ ಧೀಮಂತ ಮಹಿಳೆ. ಬಡ ಜನರ ಏಳಿಗೆಗಾಗಿ ಇಂದಿರಾ ಗಾಂಧೀ ಅವರು ಹಾಕಿ ಕೊಟ್ಟಂತಹ ಕಾರ್ಯಕ್ರಮಗಳು ಇಂದಿಗೂ ಮುಂದುವರೆದಿದ್ದು ಇಂದು ಅವರ ಜನ್ಮ ದಿನದಂದು ಬೀದಿ ಬದಿ ವ್ಯಾಪಾರಸ್ಥರಿಗೆ ಹೈ-ಟೆಕ್ ತಳ್ಳುಗಾಡಿಗಳನ್ನು ವಿತರಿಸುತ್ತಿರುವದು ಅತ್ಯಂತ ಸಂತಸದ ಸಂಗತಿಯಾಗಿದೆ ಎಂದರು.
ಬೀದಿ ಬದಿ ವ್ಯಾಪಾರಸ್ಥರಿಗೆ ಸರ್ಕಾರದ ಸೌಲಭ್ಯಗಳನ್ನು ವಿತರಿಸುವಲ್ಲಿ ಜಿಲ್ಲೆಯು ಒಂದು ಹೆಜ್ಜೆ ಮುಂದೆ ಇದ್ದು ಇದರ ಸಂಪೂರ್ಣ ಸದುಪಯೋಗ ಪಡಿಸಿಕೊಳ್ಳುವ ಮೂಲಕ ಆರ್ಥಿಕವಾಗಿ ಸಧೃಢರಾಗುವಂತೆ ತಿಳಿಸಿದರು. ಈ ಹೈ-ಟೆಕ್ ತಳ್ಳುಗಾಡಿಗಳಲ್ಲಿ ವ್ಯಾಪಾರಸ್ಥರು ತಮ್ಮ ತರಕಾರಿ ಶೇಖರಣೆ ಜೊತೆಗೆ ಸುರಕ್ಷಿತವಾಗಿ ಇಟ್ಟುಕೊಳ್ಳಬಹುದಾಗಿದೆ.
ಇಂದು ನಗರದ 145 ಬೀದಿ ಬದಿ ವ್ಯಾಪಾರಸ್ಥರಿಗೆ ಹೈ-ಟೆಕ್ ತಳ್ಳುಗಾಡಿಗಳನ್ನು ವಿತರಿಸಲಾಗಿದ್ದು ಬಾಕಿ ಫಲಾನುಭವಿಗಳಿಗೆ ಬರುವ ಜನವರಿ ಅಂತ್ಯದೊಳಗಾಗಿ ವಿತರಿಸಲಾಗುವದು ಇದರ ಜೊತೆಗೆ ಬೀದಿ ಬದಿ ವ್ಯಾಪಾರಸ್ಥರ ಅನುಕೂಲಕ್ಕಾಗಿ ನಗರದಲ್ಲಿ ಕೋಲ್ಡ್ ಸ್ಟೋರೇಜ್ ಘಟಕ ನಿರ್ಮಾಣ ಕುರಿತು ಮನವಿಗೆ ಸ್ಪಂದಿಸುತ್ತಾ ಜನವರಿ 19 ರೊಳಗಾಗಿ ಕೋಲ್ಡ್ ಸ್ಟೋರೇಜ್ ಘಟಕವನ್ನು ನಿರ್ಮಾಣ ಮಾಡಲಾಗುವದು ಎಂದು ಸಚಿವ ಎಚ್.ಕೆ.ಪಾಟೀಲ ಅವರು ಇದೇ ಸಂದರ್ಭದಲ್ಲಿ ಬೀದಿ ಬದಿ ವ್ಯಾಪಾರಸ್ಥರಿಗೆ ಭರವಸೆಯನ್ನು ನೀಡಿದರು.
ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ವೈಶಾಲಿ ಎಂ.ಎಲ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿ.ಎಸ್.ನೇಮಗೌಡರ, ಗದಗ-ಬೆಟಗೇರಿ ನಗರಾಭಿವೃದ್ಧಿ ಪ್ರಾಧಿಕಾರಿದ ಆಯುಕ್ತ ರಮೇಶ ವಟಗಲ್, ಮಾಜಿ ಶಾಸಕ ಡಿ.ಆರ್.ಪಾಟೀಲ, ನಗರ ಸಭೆ ಸದಸ್ಯರು, ಗದಗ ಜಿಲ್ಲಾ ಬೀದಿ ಬದಿ ವ್ಯಾಪಾರಸ್ಥರ ವಿವಿದೋದ್ದೇಶಗಳ ಸಂಘದ ಪದಾಧಿಕಾರಿಗಳು, ಬೀದಿ ಬದಿ ವ್ಯಾಪಾರಸ್ಥರು, ಸಾರ್ವಜನಿಕರು ಉಪಸ್ಥಿತರಿದ್ದರು.
- ನಕಲಿ ಖಾತೆ ಸೃಷ್ಟಿಸಿ ಇಡೀ ಗ್ರಾಮವನ್ನೇ ಮಾರಾಟಕ್ಕಿಟ್ಟ ಪಂಚಾಯಿತಿ ಬಿಲ್ ಕಲೆಕ್ಟರ್…ಪತ್ನಿ ಹೆಸರಿಗೆ ದಾಖಲೆ ಸೃಷ್ಟಿಸಿ ಭೂಪ…!!!
- ಆದಾಯ ಮೀರಿದ ಆಸ್ತಿ ಹೊಂದಿದ ಕೇಸ್… ಡಿಸಿಎಂ ಡಿಕೆಶಿ ಸಿಬಿಐ ಕೇಸ್ ವಾಪಸ್ ಗೆ ನಿರ್ಧರಿಸಿದ ಸರ್ಕಾರದ ಕ್ರಮ ವಿರೋಧಿಸಿ… ನ್ಯಾಯಾಲಯದ ಮೆಟ್ಟಿಲೇರಿದ ಶಾಸಕ ಬಸನಗೌಡ ಪಾಟೀಲ ಯತ್ನಾಳ
- ಮುಂಗಾರುಮಳೆ ಬೆಡಗಿಗೆ ಕೂಡಿ ಬಂದ ಕಂಕಣ… ಪೂಜಾ ಗಾಂಧಿ ಮದುವೆ ಆಗುವ ಹುಡುಗ ಯಾರು ಗೊತ್ತೆ….!
- ಗದಗ ನಗರದಲ್ಲಿನ 22 ಗುಂಟೆ ನಿವೇಶನ ಹಕೀಕತ್… ರಾಕೇಶ ಸಿದ್ದರಾಮಯ್ಯ ಟ್ರಸ್ಟ್ ಗೆ ಕೊಡಿ ಎಂದು ಸಿಎಂ ಆದೇಶ, ಚನ್ನಮ್ಮ ಸಮುದಾಯ ಭವನಕ್ಕೆ ನೀಡಲು ಸಚಿವ ಎಚ್ ಕೆ ಪಾಟೀಲ ಆಸಕ್ತಿ…????
- ಗದಗ-ಬೆಟಗೇರಿ ಅವಳಿ ನಗರದಲ್ಲಿ (ಥರ್ಡ್ ಐ) ಮೂರನೇ ಕಣ್ಣು ಕಟ್ಟೆಚ್ಚರ….ಸಂಚಾರಿ ನಿಯಮ ಉಲ್ಲಂಘಿಸಿದರೆ ಮನೆ ಬಾಗಿಲಿಗೆ ಬರುತ್ತೆ ದಂಡದ ನೋಟಿಸ್… ಎಸ್ಪಿ ಬಿ ಎಸ್ ನೇಮಗೌಡರ ಕಾರ್ಯಕ್ಕೆ ವ್ಯಾಪಕ ಶ್ಲಾಘನೆ…
- ಸಂವಿಧಾನ ರಕ್ಷಣೆ ನಮ್ಮೆಲ್ಲರ ಹೊಣೆ ಸಚಿವ ಡಾ.ಎಚ್ಕೆ.ಪಾಟೀಲ… ಭಾರತದ ಸಂವಿಧಾನ ಶ್ರೇಷ್ಠ ಸಂವಿಧಾನ…